ಹೊಳೆನರಸೀಪುರ: ಪಟ್ಟಣದಲ್ಲಿ ಶುಕ್ರವಾರ ನಡೆದ ಲಕ್ಷ್ಮಿನರಸಿಂಹಸ್ವಾಮಿ ಬ್ರಹ್ಮರಥೋತ್ಸವದ ವೇಳೆ ಭಕ್ತರು ಏಕಾಏಕಿ ರಥ ಎಳೆದಿದ್ದರಿಂದ ಆಗಬಹುದಾದ ಅನಾಹುತವೊಂದು ತಪ್ಪಿದೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಪತ್ನಿ ಚನ್ನಮ್ಮ ಅವರ ಮೇಲೆ ರಥ ಹರಿಯುವುದು ಕ್ಷಣಾರ್ಧದಲ್ಲಿ ತಪ್ಪಿದ್ದು, ಸ್ವಲ್ಪದರಲ್ಲೇ ಪಾರಾದರು.