ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ರೈತರ ಬಗ್ಗೆ ಕಾಳಜಿ ಇದ್ದರೆ ಕೂಡಲೇ ತುಂಗಭದ್ರಾ ಎಡದಂಡೆ ಕಾಲುವೆಯ ಗೇಟುಗಳನ್ನು ಸಂಪೂರ್ಣವಾಗಿ ತೆರೆಯಿಸಿ ನೀರು ಎಲ್ಲಿವರೆಗೆ ಬರುತ್ತದೇ ಅಲ್ಲಿಯವರೆಗೆ ನೀರು ಹರಿಸಿ ರೈತರ ಬೆಳೆಗಳನ್ನು ರಕ್ಷಿಸುವ ಮೂಲಕ ಅವರಿಗೆ ನೆರವಾಗಬೇಕು. ನೀರಿನ ಅಭಾವದಿಂದ ಬೆಳೆ ಹಾನಿಯಾಗಿರುವ ಪ್ರದೇಶಗಳಲ್ಲಿ ಸರ್ವೆ ನಡೆಸಿ ಸೂಕ್ತ ಪರಿಹಾರ ಒದಗಿಸಲು ಮುಂದಾಗಬೇಕು. ಅಲ್ಲದೆ ಈಗಾಗಲೇ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹಳ್ಳ, ಕೆರೆಗಳಲ್ಲಿ ನೀರಿಲ್ಲದೆ ಬತ್ತಿ ಹೋಗಿದ್ದು, ಕುಡಿಯುವ ನೀರಿಗಾಗಿ ಜನ ಹಾಗೂ ಜಾನುವಾರುಗಳು ಪರದಾಡುತ್ತಿದ್ದಾರೆ. ಈ ಬಗ್ಗೆಯೂ ಸೂಕ್ತ ಕ್ರಮಕೈಗೊಂಡು ಬೇಸಿಗೆಯಲ್ಲಿ ಯಾವುದೇ ತೊಂದರೆಯಾಗದಂತೆ ಎಚ್ಚರ ವಹಿಸಬೇಕೆಂದು ಒತ್ತಾಯಿಸಿದ್ದಾರೆ.