ಜಸಕೇತನ್ ಅವರ ಮಗ ಈಜುಕೊಳದ ಬಳಿ ಆಟವಾಡಲು ಹೋಗಿದ್ದ. ಆತನನ್ನು ತಡೆದಿದ್ದ ಭದ್ರತಾ ಸಿಬ್ಬಂದಿ, ವಾಪಸ್ ಕಳುಹಿಸಿದ್ದರು. ಅಷ್ಟಕ್ಕೆ ಕೋಪಗೊಂಡ ಆರೋಪಿಗಳು, ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದರು. ಜಗಳ ಬಿಡಿಸಲು ಹೋಗಿದ್ದ ಇಮ್ರಾನ್, ಹಲ್ಲೆಯನ್ನು ಪ್ರಶ್ನಿಸಿದ್ದರು. ಆಗ ಮಾತಿನ ಚಕಮಕಿ ನಡೆದು ಅವರ ಮೇಲೂ ಆರೋಪಿಗಳು ಹಲ್ಲೆ ಮಾಡಿದ್ದರು ಎಂದು ಪೊಲೀಸರು ವಿವರಿಸಿದರು.