ಶಿವಯೋಗಾಶ್ರಮದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ನೇತೃತ್ವದ ತಜ್ಞರ ಸಮಿತಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿರುವುದು ಸ್ವಾಗತಾರ್ಹ. ಬಸವಾದಿ ಶರಣರ ಹೋರಾಟಗಳಿಗೆ ಗೌರವ, ಘನತೆ ಸಿಗಬೇಕಾದರೆ ಲಿಂಗಾಯತ ಪ್ರತ್ಯೇಕ ಧರ್ಮವಾಗಲೇಬೇಕು’ ಎಂದು ಪ್ರತಿಪಾದಿಸಿದರು.