ಕರ್ನಾಟಕಕ್ಕೆ ಕುಡಿಯುವ ನೀರು ನೀಡುವುದಕ್ಕೆ ಅಭ್ಯಂತರ ಇಲ್ಲ ಮತ್ತು ಮಾತುಕತೆಗೂ ಸಿದ್ಧ ಎಂದು ಗೋವಾ ಮುಖ್ಯಮಂತ್ರಿ ಮನೋಹರ ಪರ್ರೀಕರ್ ಹಿಂದೊಮ್ಮೆ ಹೇಳಿದ್ದರು. ಆದರೆ, ಯಾವುದೇ ಕಾರಣಕ್ಕೂ ನೀರು ಹರಿಸಲು ಅವಕಾಶ ಕೊಡುವುದಿಲ್ಲ ಎಂದು ಬಿಜೆಪಿಯ ಮಿತ್ರ ಪಕ್ಷ ಗೋವಾ ಫಾರ್ವರ್ಡ್ ಪಾರ್ಟಿ ಪ್ರತಿಕ್ರಿಯೆ ನೀಡಿತ್ತು.