ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನಿಂದ ಬೆಂಗಳೂರನ್ನು ರಕ್ಷಿಸಿ ಎಂದು ಸರಣಿ ಆರೋಪಗಳ ಟ್ವೀಟ್‌ ಮಾಡಿದ ಬಿಜೆಪಿ

Last Updated 5 ಮಾರ್ಚ್ 2018, 13:04 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿನ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ ಆಕ್ಷಾಂಕೆಯಿಂದಾಗಿ ಬಿಜೆಪಿ ತನ್ನ ಚುನಾವಣಾ ಪ್ರಚಾರವನ್ನು ಪ್ರತಿದಿನ ಪ್ರಬಲಗೊಳಿಸುತ್ತಿದೆ. ಅದಕ್ಕಾಗಿ ‘ಬೆಂಗಳೂರು ರಕ್ಷಿಸಿ’ ಅಭಿಯಾನ ಹಮ್ಮಿಕೊಂಡಿದ್ದಲ್ಲದೆ. ‘ಕಾಂಗ್ರೆಸ್‌ ಅಧಿಕಾರಕ್ಕೆ ಬರುವ ನೀಡಿದ ಭರವಸೆ ಏನು, ಐದು ವರ್ಷಗಳ ಬಳಿಕ ನಗರದ ವಾಸ್ತವ ಸ್ಥಿತಿ ಏನಿದೆ’ ಎಂಬುದರ ಕುರಿತು ಟ್ವೀಟ್‌ಗಳನ್ನು ಮಾಡಿದೆ. 

‘ನಗರದಲ್ಲಿನ 350 ಕಿ.ಮೀ.ನಷ್ಟು ವಿಸ್ತರಿಸಿರುವ 268 ರಸ್ತೆಗಳನ್ನು ಮೇಲ್ದರ್ಜೆಗೆ ಏರಿಸುವುದಾಗಿ ಕಾಂಗ್ರೆಸ್‌ ಹೇಳಿತ್ತು. ಆದರೆ, ರಸ್ತೆಗಳಲ್ಲಿ 24 ಸಾವಿರ ಗುಂಡಿಗಳನ್ನು ಕಾಣುವಂತಾಯಿತು. ರಸ್ತೆಗಳ ಅಭಿವೃದ್ಧಿಯಲ್ಲಿ ಹಗಲು ದರೋಡೆ ನಡೆಯುತ್ತಿದೆ. ಉದಾಹರಣೆಗೆ ಕೆಂಪೇಗೌಡ ಬಡಾವಣೆಯಿಂದ ಮೈಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಕೇವಲ 12 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿಗೆ ₹ 468 ಕೋಟಿ ವ್ಯಯಿಸಲಾಗಿದೆ’ ಎಂದು ಆರೋಪಿಸಿದೆ.

‘₹ 650 ಕೋಟಿ ವೆಚ್ಚದಲ್ಲಿ 12 ರಸ್ತೆಗಳನ್ನು ಟೆಂಡರ್‌ ಶ್ಯೂರ್‌ ಮಾದರಿಯಲ್ಲಿ ಅಭಿವೃದ್ಧಿ ಪಡಿಸುತ್ತೇವೆ ಎಂದಿದ್ದರು. ಈ ಯೋಜನೆಯಲ್ಲಿ ಕೇವಲ 16 ಕಿ.ಮೀ. ರಸ್ತೆ ಒಳಗೊಂಡಿದೆ. ಪ್ರತಿ ಕಿ.ಮೀ. ರಸ್ತೆ ಅಭಿವೃದ್ಧಿಗೆ ₹ 39 ಕೋಟಿ ಖರ್ಚು ಮಾಡಲಾಗಿದೆ. ಈ ಯೋಜನೆ ಕಾಂಗ್ರೆಸ್‌ ನಾಯಕರಿಗೆ ಸಂಪತ್ತು ಗಳಿಕೆಯ ಮೂಲವಾಗಿದೆ’

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT