ಈ ಕುರಿತು ಲೋಕಸಭೆಯಲ್ಲಿ ಮಾಹಿತಿ ನೀಡಿದ ಕೇಂದ್ರ ಸಂಸ್ಕೃತಿ ಖಾತೆ ರಾಜ್ಯ ಸಚಿವ ಮಹೇಶ್ ಶರ್ಮ, ‘ಸೂರ್ಯೋದಯಕ್ಕೆ 45 ನಿಮಿಷ
ಮುನ್ನ ಟಿಕೆಟ್ ವಿತರಣೆ ಆರಂಭವಾಗಲಿದೆ. ಸೂರ್ಯಾಸ್ತಕ್ಕೆ 30 ನಿಮಿಷಮೊದಲು ವಿತರಣೆ ಕಾರ್ಯ ಸ್ಥಗಿತಗೊಳಿಸಲಾಗುತ್ತದೆ. ಈ ಸಂಬಂಧ ಭಾರತೀಯ ಪುರಾತತ್ವ ಇಲಾಖೆಗೆ ಜನವರಿ 25ರಂದೇ ಸೂಚಿಸಲಾಗಿದೆ. ಇದರಿಂದ ಪ್ರವಾಸಿಗರಿಗೆ ಅನುಕೂಲವಾಗಲಿದೆ ಎಂದರು.