ಬೆಳಿಗ್ಗೆ 8ಗಂಟೆಗೆ ನಿತ್ಯಾನಂದ ಅವರು ದೇವಸ್ಥಾನದ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇತ್ತು. ಆದರೆ, 11ರ ಸುಮಾರಿಗೆ ಅವರು ಸ್ಥಳಕ್ಕೆ ಧಾವಿಸಿದರು. ಅವರ ಆಶ್ರಮದ ಶಿಷ್ಯಂದಿರು ಹಾಗೂ ದೇವಸ್ಥಾನ ಟ್ರಸ್ಟ್ ಕಮಿಟಿಯ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿ ಕರೆದೊಯ್ದರು. ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅವರು ಅಲ್ಲಿಂದ ನಿರ್ಗಮಿಸಿದರು.