ಕರಾವಳಿಯಲ್ಲಿ ಶಾಂತಿ, ನೆಮ್ಮದಿ ನೆಲೆಸಬೇಕು ಎಂಬುದು ಇಲ್ಲಿಯ ಜನರ ಆಶಯ. ಯಾರೋ ಮಾಡಿದ ತಪ್ಪಿನಿಂದ ದುಷ್ಕೃತ್ಯಗಳು ನಡೆಯುತ್ತಿವೆ. ಆದರೆ ಇಂತಹ ಘಟನೆಗಳನ್ನು ಹತ್ತಿಕ್ಕುವುದು ಸರ್ಕಾರದ ಕರ್ತವ್ಯ. ಅಶಾಂತಿಯ ವಾತಾವರಣ ನಿರ್ಮಾಣ ಆದಾಗ, ಮುಖ್ಯಮಂತ್ರಿ ಇಲ್ಲಿನ ವಿವಿಧ ಸಮಾಜದ ಮುಖಂಡರ ಸಭೆ ನಡೆಸಿ, ಪರಿಹಾರ ಕಂಡುಕೊಳ್ಳಬೇಕಿತ್ತು. ನಿಮ್ಮಂಥವರ ಜತೆ ಚರ್ಚಿಸಿದರೆ ಖಂಡಿತವಾಗಿಯೂ ಸಮಸ್ಯೆಗೆ ಪರಿಹಾರ ದೊರೆಯುತ್ತದೆ. ಇಂತಹ ಪ್ರಯತ್ನ ಮಾಡಲು ಮುಖ್ಯಮಂತ್ರಿಗೆ ಏನು ತೊಂದರೆ ಎಂದು ಅವರು ಪ್ರಶ್ನಿಸಿದರು.