‘ರಾತ್ರಿ 9 ಗಂಟೆ ಸುಮಾರಿಗೆ ಜಾನ್ರಾಮ್ ಹಾಗೂ ಇಬ್ಬರು ಸಿಬ್ಬಂದಿ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದರು. ಅದೇ ವೇಳೆ ಮಳಿಗೆಗೆ ನುಗ್ಗಿದ್ದ ನಾಲ್ವರು ದುಷ್ಕರ್ಮಿಗಳು, ಮಚ್ಚು ತೋರಿಸಿ ಬೆದರಿಸಿದ್ದರು. ಅದನ್ನು ಸಿಬ್ಬಂದಿ ಪ್ರಶ್ನಿಸಿದ್ದರು. ಆಗ ದುಷ್ಕರ್ಮಿಯೊಬ್ಬ, ಚಂದೂರಾಮ್ ಅವರ ಕೈಗೆ ಮಚ್ಚಿನಿಂದ ಹೊಡೆದಿದ್ದ. ನಂತರ ಚಿನ್ನಾಭರಣಗಳನ್ನು ಬ್ಯಾಗ್ಗಳಲ್ಲಿ ತುಂಬಿಕೊಂಡು ಆರೋಪಿಗಳು ಪರಾರಿಯಾಗಿದ್ದಾರೆ’ ಎಂದು ಪೊಲೀಸರು ತಿಳಿಸಿದರು.