‘ಎಂಜಿನಿಯರಿಂಗ್ ವ್ಯಾಸಂಗವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದ ಶ್ರೀಕೃಷ್ಣ, 2014ರಿಂದಲೂ ಮೊಬೈಲ್ ಬಳಕೆ ಮಾಡುತ್ತಿಲ್ಲ. ಕಂಪ್ಯೂಟರ್ ಹಾಗೂ ಲ್ಯಾಪ್ಟಾಪ್ ಮಾತ್ರ ಬಳಸುತ್ತಿದ್ದ. ತಂತ್ರಜ್ಞಾನ ಬಳಕೆಯಲ್ಲಿ ಪರಿಣಿತನಾಗಿದ್ದಆತ, ಮೊಹಮದ್ ನಲಪಾಡ್ ಸ್ಥಾಪಿಸಿದ್ದ ‘ನಲಪಾಡ್ ತಂಡ’ದಲ್ಲಿ ಗುರುತಿಸಿ
ಕೊಂಡಿದ್ದ. ಸಾಫ್ಟ್ವೇರ್ ಹಾಗೂ ವೆಬ್ಸೈಟ್ ಹ್ಯಾಕ್ ಮಾಡುವ ಕಲೆಯೂ ಆತನಿಗೆ ಗೊತ್ತಿತ್ತು ಎಂಬುದನ್ನು ಸ್ನೇಹಿತರು ತಿಳಿಸಿದ್ದಾರೆ’ ಎಂದು ಪೊಲೀಸರು ಹೇಳಿದರು.‘ಕುಟುಂಬದವರು, ಸ್ನೇಹಿತರನ್ನು ವಿಚಾರಣೆಗೆ ಒಳಪಡಿಸಿ ಮಾಹಿತಿ ಕಲೆಹಾಕಿದ್ದೇವೆ. ಆರೋಪಿಯು ವಿದೇಶಕ್ಕೆ ಹೋಗಿರುವ ಅನುಮಾನವಿದೆ. ಲುಕ್ಔಟ್ ನೋಟಿಸ್ ಜಾರಿ ಮಾಡಿದ್ದೇವೆ’ ಎಂದರು.