‘ಸಿದ್ದರಾಮಯ್ಯ ಬಿಜೆಪಿ ಮುಖಂಡರನ್ನು, ಕಾರ್ಯಕರ್ತರನ್ನು ಗೂಂಡಾಗಳೆಂದೂ ಟೀಕಿಸುತ್ತಿದ್ದಾರೆ. ಆದರೆ, ವಿದ್ವತ್ ಮೇಲೆ ಹಲ್ಲೆ ಮಾಡಿರುವ ನಲಪಾಡ್ ಯಾರು? ಸಿದ್ದರಾಮಯ್ಯ ಅವರ ಆಪ್ತ ನಾರಾಯಣಸ್ವಾಮಿ ಇತ್ತೀಚೆಗೆ ಬೆಂಗಳೂರಿನಲ್ಲಿ ಕಾರ್ಪೋರೇಷನ್ ಕಚೇರಿಗೆ ನುಗ್ಗಿ ಅಲ್ಲಿ ಪೆಟ್ರೋಲ್ ಸುರಿದು ದೌರ್ಜನ್ಯ ನಡೆಸಿರುವುದು ಕಾಂಗ್ರೆಸ್ ಸರ್ಕಾರದ ಗೂಂಡಾಗಿರಿ, ದೌರ್ಜನ್ಯಕ್ಕೆ ಸಾಕ್ಷಿಯಾಗಿದೆ. ಇದನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ. ಜನರೇ ಕಾಂಗ್ರೆಸ್ಗೆ ಪಾಠ ಕಲಿಸಲಿದ್ದಾರೆ’ ಎಂದರು.