‘ಶಾಸಕ ಅಶೋಕ್ ಖೇಣಿ ಅವರನ್ನು ಕಾಂಗ್ರೆಸ್ಗೆ ಸೇರಿಸಿಕೊಂಡಿದ್ದು ಬಹಿರಂಗ ರಾಜಕೀಯ ವ್ಯಭಿಚಾರ. ನೇರವಾಗಿ ಭ್ರಷ್ಟಾಚಾರವನ್ನು ಅಪ್ಪಿಕೊಂಡಿದ್ದಾರೆ. ಖೇಣಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡದಕ್ಕೆ ಸ್ವತಃ ಕಾಂಗ್ರೆಸ್ಸಿಗರೇ ವಿರೋಧಿಸುತ್ತಿದ್ದಾರೆ. ಆದರೆ, ಖೇಣಿ ಜೈಲಿಗೆ ಹೋಗಿಲ್ಲ ಎಂದು ಸಿದ್ದರಾಮಯ್ಯ, ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ಇನ್ನೊಂದೆಡೆ ಜೈಲಿಗೆ ಹೋಗಿ ಬಂದಿರುವ ಆನಂದ್ ಸಿಂಗ್, ಬಿ. ನಾಗೇಂದ್ರ ಅವರನ್ನು ಸೇರಿಸಿಕೊಂಡು ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆ. ಕಾಂಗ್ರೆಸ್ ನೈತಿಕತೆ ಕಳೆದುಕೊಂಡಿರುವುದಕ್ಕೆ ಇದೇ ಸಾಕ್ಷಿ’ ಎಂದರು.