‘ಪರೀಕ್ಷೆ ಹಾಗೂ ಸಂದರ್ಶನಗಳನ್ನು ಪಾರದರ್ಶಕವಾಗಿ ಮಾಡುತ್ತೇವೆ’ ಎಂದು ಕೆಪಿಎಸ್ಸಿ ಬಡಾಯಿ ಕೊಚ್ಚಿಕೊಳ್ಳುತ್ತದೆ. ಆದರೆ, ಯಾವುದೇ ಪರೀಕ್ಷೆಯ ಫಲಿತಾಂಶ ಮತ್ತು ಕಟ್ಆಫ್ ಅಂಕಗಳನ್ನು ಅದು ಪ್ರಕಟಿಸುವುದಿಲ್ಲ. ಇದು ಸರಿಯಲ್ಲ. ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಪಾರದರ್ಶಕತೆ ಕಾಯ್ದುಕೊಂಡು, ಎಲ್ಲರಿಗೂ ನ್ಯಾಯ ಒದಗಿಸಬೇಕು.