ತೆಲಂಗಾಣದಲ್ಲಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಟಿಆರ್ಎಸ್ ಸದಸ್ಯರು ಪ್ರತಿಭಟನೆ ನಡೆಸಿದರೆ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನ ನೀಡಬೇಕು ಎಂದು ಟಿಡಿಪಿ ಸಂಸದರು ಒತ್ತಾಯಿಸಿದರು. ಮರಾಠಿಗೆ ಶಾಸ್ತ್ರೀಯ ಭಾಷಾ ಸ್ಥಾನ ನೀಡಬೇಕು ಎಂದು ಶಿವಸೇನಾ ಸಂಸದರು ಆಗ್ರಹಿಸಿದರು. ಎಲ್ಲರ ಪ್ರತಿಭಟನೆ ಜೋರಾದ ಕಾರಣ ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು.