ಚೆನ್ನೈ: ಇಲ್ಲಿನ ತಿರುವೊಟ್ಟಿಯೂರ್ ಎಂಬಲ್ಲಿ ಸಂವಿಧಾನ ಶಿಲ್ಪಿ ಬಿ. ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದಾರೆ.
ಪೊಲೀಸರ ಪ್ರಕಾರ ಗುರುವಾರ ಬೆಳಿಗ್ಗೆ 7 ಗಂಟೆಗೆ ತಿರುವಟ್ಟಿಯೂರ್ ಮಾರುಕಟ್ಟೆಯ ಬಳಿ ಇರುವ ಗ್ರಾಮ ರಸ್ತೆಯಲ್ಲಿದ್ದ ಅಂಬೇಡ್ಕರ್ ಪ್ರತಿಮೆಗೆ ದುಷ್ಕರ್ಮಿಗಳು ಕೆಂಪು ಪೇಂಟ್ ಬಳಿದಿದ್ದಾರೆ. ವಿಷಯ ತಿಳಿದು ಪೊಲೀಸರು ಆಗಮಿಸುವ ಮುನ್ನವೇ ದುಷ್ಕರ್ಮಿಗಳು ಅಲ್ಲಿಂದ ಪಲಾಯನ ಮಾಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿರುವುದಾಗಿ ದ ನ್ಯೂಸ್ ಮಿನಿಟ್ ಸುದ್ದಿತಾಣ ವರದಿ ಮಾಡಿದೆ.