ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿನಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ

Last Updated 8 ಮಾರ್ಚ್ 2018, 9:38 IST
ಅಕ್ಷರ ಗಾತ್ರ

ಚೆನ್ನೈ: ಇಲ್ಲಿನ ತಿರುವೊಟ್ಟಿಯೂರ್ ಎಂಬಲ್ಲಿ ಸಂವಿಧಾನ ಶಿಲ್ಪಿ ಬಿ. ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದಾರೆ.
ಪೊಲೀಸರ ಪ್ರಕಾರ ಗುರುವಾರ ಬೆಳಿಗ್ಗೆ 7 ಗಂಟೆಗೆ ತಿರುವಟ್ಟಿಯೂರ್ ಮಾರುಕಟ್ಟೆಯ ಬಳಿ ಇರುವ ಗ್ರಾಮ ರಸ್ತೆಯಲ್ಲಿದ್ದ ಅಂಬೇಡ್ಕರ್ ಪ್ರತಿಮೆಗೆ ದುಷ್ಕರ್ಮಿಗಳು ಕೆಂಪು ಪೇಂಟ್ ಬಳಿದಿದ್ದಾರೆ. ವಿಷಯ ತಿಳಿದು  ಪೊಲೀಸರು ಆಗಮಿಸುವ ಮುನ್ನವೇ ದುಷ್ಕರ್ಮಿಗಳು ಅಲ್ಲಿಂದ ಪಲಾಯನ ಮಾಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿರುವುದಾಗಿ ದ ನ್ಯೂಸ್ ಮಿನಿಟ್ ಸುದ್ದಿತಾಣ ವರದಿ ಮಾಡಿದೆ.

ತಿರುವೊಟ್ಟಿಯೂರ್ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರಿದಿದೆ.

ಎರಡು ದಿನಗಳ ಹಿಂದೆಯಷ್ಟೇ ವೆಲ್ಲೂರಿನಲ್ಲಿ ಸಮಾಜ ಸುಧಾರಕ ಪೆರಿಯಾರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT