ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ದೇಶಕ ಸ್ಥಾನದಿಂದ ಪತ್ತಾರ ಅನರ್ಹ

ಮರುಪಾವತಿಸದ ಸಾಲ:
Last Updated 8 ಮಾರ್ಚ್ 2018, 11:29 IST
ಅಕ್ಷರ ಗಾತ್ರ

ಖಾನಾಪುರ: ತಾವೇ ನಿರ್ದೇಶಕರಾಗಿದ್ದ ಖಾನಾಪುರ ತಾಲ್ಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಸಂಘದಿಂದ ಪಡೆದ ಸಾಲವನ್ನು ಮರುಪಾವತಿಸದ ಅಶೋಕ ಪತ್ತಾರ ಅವರನ್ನು ಸಂಘದ ನಿರ್ದೇಶಕ ಸ್ಥಾನದಿಂದ ಅನರ್ಹಗೊಳಿಸಿ ಸಹಕಾರ ಸಂಘಗಳ ಉಪನಿಬಂಧಕರು ಆದೇಶ ನೀಡಿದ್ದಾರೆ.

2013ರಲ್ಲಿ ಜರುಗಿದ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಸಂಘದ ನಿರ್ದೇಶಕರಾಗಿ ಅಶೋಕ ಅವಿರೋಧವಾಗಿ ಆಯ್ಕೆಯಾಗಿದ್ದರು. ಸಂಘದಿಂದ ಪಡೆದ ಸಾಲವನ್ನು ಮರುಪಾವತಿ ಮಾಡಿರಲಿಲ್ಲ. ಇದರ ಬಗ್ಗೆ ಶಿಕ್ಷಕ ಶಿವಾನಂದ ಕುಂದರಗಿ ಅವರು 2016ರಲ್ಲಿ ಸಹಕಾರ ಸಂಘಗಳ ಉಪ ನಿಬಂಧಕರ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.ವಿಚಾರಣೆ ನಡೆಸಿದ ನ್ಯಾಯಾಲಯ ಶಿಕ್ಷಕರ ಸಂಘದ ನಿರ್ದೇಶಕ ಹುದ್ದೆಯಿಂದ ಅನರ್ಹಗೊಳಿಸಿ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT