2013ರಲ್ಲಿ ಜರುಗಿದ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಸಂಘದ ನಿರ್ದೇಶಕರಾಗಿ ಅಶೋಕ ಅವಿರೋಧವಾಗಿ ಆಯ್ಕೆಯಾಗಿದ್ದರು. ಸಂಘದಿಂದ ಪಡೆದ ಸಾಲವನ್ನು ಮರುಪಾವತಿ ಮಾಡಿರಲಿಲ್ಲ. ಇದರ ಬಗ್ಗೆ ಶಿಕ್ಷಕ ಶಿವಾನಂದ ಕುಂದರಗಿ ಅವರು 2016ರಲ್ಲಿ ಸಹಕಾರ ಸಂಘಗಳ ಉಪ ನಿಬಂಧಕರ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.ವಿಚಾರಣೆ ನಡೆಸಿದ ನ್ಯಾಯಾಲಯ ಶಿಕ್ಷಕರ ಸಂಘದ ನಿರ್ದೇಶಕ ಹುದ್ದೆಯಿಂದ ಅನರ್ಹಗೊಳಿಸಿ ಆದೇಶಿಸಿದೆ.