ಮುಂಬೈ: ತಮಿಳುನಾಡಿನ ಎಸ್.ಬದ್ರಿನಾಥ್ ಅವರ ಬದಲು ವಿರಾಟ್ ಕೊಹ್ಲಿ ಅವರನ್ನು ತಂಡಕ್ಕೆ ಆಯ್ಕೆ ಮಾಡಿದ್ದಕ್ಕೆ ಭಾರಿ ಬೆಲೆ ತೆರಬೇಕಾಗಿತ್ತು ಎಂದು ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಅಧ್ಯಕ್ಷರಾಗಿದ್ದ ದಿಲೀಪ್ ವೆಂಗ್ಸರ್ಕಾರ್ ಹೇಳಿದರು.
‘2008ರಲ್ಲಿ ಕೊಹ್ಲಿ ಅವರನ್ನು ಆಯ್ಕೆ ಮಾಡಿದ್ದಕ್ಕೆ ಅಂದಿನ ಬಿಸಿಸಿಐ ಕಾರ್ಯದರ್ಶಿ ಎನ್.ಶ್ರೀನಿವಾಸನ್ ಕೋಪಿಸಿಕೊಂಡಿದ್ದರು.
ಇದು ನನ್ನ ಅಧ್ಯಕ್ಷ ಸ್ಥಾನಕ್ಕೇ ಕುತ್ತು ತಂದಿತು. ಶ್ರೀಕಾಂತ್ ಅವರ ಹೆಗಲಿಗೆ ಆಯ್ಕೆಯ ಸಮಿತಿ ಅಧ್ಯಕ್ಷ ಸ್ಥಾನವನ್ನು ಹೊರಿಸಲಾಯಿತು’ ಎಂದು ಅವರು ಇಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದೂರಿದರು.