ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರತಾ ಸಮಿತಿ ರಚನೆ

Last Updated 8 ಮಾರ್ಚ್ 2018, 19:45 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿಗೆ ದುಷ್ಕರ್ಮಿಯೊಬ್ಬ ಚಾಕು ಇರಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ಹೈಕೋರ್ಟ್‌ ತನ್ನ ಮೂರು ಪೀಠಗಳು ಮತ್ತು ನ್ಯಾಯಮೂರ್ತಿಗಳ ನಿವಾಸಗಳ ಭದ್ರತಾ ವ್ಯವಸ್ಥೆ ಪರಿಶೀಲನೆಗೆ ‘ಭದ್ರತಾ ಸಮಿತಿ’ ರಚಿಸಿದೆ.

ಭದ್ರತಾ ಸಮಿತಿಯಲ್ಲಿ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಮತ್ತು ನ್ಯಾಯಮೂರ್ತಿ ರವಿ ಮಳೀಮಠ  ಇದ್ದಾರೆ. ಹಾಗೆಯೇ, ಆಡಳಿತ ವಿಭಾಗದ ರಿಜಿಸ್ಟ್ರಾರ್ ಸಮಿತಿಯಲ್ಲಿ ಪ್ರೆಸೆಂಟಿಂಗ್ ಆಫೀಸರ್ ಆಗಿದ್ದಾರೆ. ಈ ಸಮಿತಿಯು ಹೈಕೋರ್ಟ್  ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿ ಪೀಠ, ಮುಖ್ಯ ನ್ಯಾಯಮೂರ್ತಿ ಮತ್ತು  ನ್ಯಾಯಮೂರ್ತಿಗಳ ನಿವಾಸಗಳ ಭದ್ರತಾ ವ್ಯವಸ್ಥೆ ಪರಿಶೀಲಿಸಲಿದೆ.

ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರ ಆದೇಶಾನುಸಾರ ಭದ್ರತಾ ಸಮಿತಿ ರಚಿಸಿ ರಿಜಿಸ್ಟ್ರಾರ್ ಜನರಲ್ ಅಶೋಕ್ ಜಿ.ನಿಜಗಣ್ಣನವರ್ ಮಾರ್ಚ್ 7ರಂದು ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT