‘ಇಂದಿನ ಶಿಕ್ಷಣ ಪದ್ಧತಿಯಲ್ಲಿ ಕಲೆ ಹಾಗೂ ಅದರ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಬೇಕು. ಇಂದಿನ ಪೀಳಿಗೆಯ ವಿದ್ಯಾರ್ಥಿಗಳು ನಮ್ಮ ಭಾರತೀಯ ಸಂಸ್ಕೃತಿಯ ಬೆಳವಣಿಗೆಯಲ್ಲಿ ಮಹತ್ವದ ಪಾತ್ರವಹಿಸಬೇಕು. ಈ ಸಾಲಿನ ಆತ್ಮತೃಷಾ ಉತ್ಸವ ಮನರಂಜನೆಯ ಉತ್ಸವವಾಗಿ ಉಳಿಯದೆ, ಹಲವಾರು ಸಂಸ್ಥೆಗಳ ಜೊತೆ ಕೈಜೋಡಿಸಿ ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಸಹಾಯ ಮಾಡುತ್ತಿದೆ’ ಎಂದು ಪಿ.ಇ.ಎಸ್. ವಿಶ್ವವಿದ್ಯಾಲಯದ ಸಂಸ್ಥಾಪಕ ಎಂ.ಆರ್. ದೊರೆಸ್ವಾಮಿ ತಿಳಿಸಿದರು.