ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಬೆಂಗಳೂರಿನ ಮಲ್ಲೇಶ್ವರ ಠಾಣೆಯಲ್ಲಿ 2016ರ ಮಾರ್ಚ್ 22ರಂದು ವಂಚನೆ, ಕಳ್ಳತನ ಮತ್ತು ಇತರ ಅಪರಾಧಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಉಪನ್ಯಾಸಕರು, ಪೋಷಕರು, ಖಜಾನೆ ಇಲಾಖೆ ಉದ್ಯೋಗಿಗಳು ಸೇರಿದಂತೆ 18 ಮಂದಿಯನ್ನು ಬಂಧಿಸಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ್ದ ಸರ್ಕಾರ, ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಆರೋಪಿಗಳ ವಿರುದ್ಧ ಮೊಕದ್ದಮೆ ದಾಖಲಿಸಿತ್ತು.