ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಕಳೆದ ಫೆಬ್ರುವರಿ 16ರಂದು ಸುಪ್ರೀಂಕೋರ್ಟ್ ಪ್ರಕಟಿಸಿರುವ ಆದೇಶಕ್ಕೆ ಅನುಗುಣವಾಗಿ ಆರು ವಾರಗಳೊಳಗೆ ನೀರು ಹಂಚಿಕೆ ಕುರಿತ ‘ಸ್ಕೀಂ’ ರೂಪಿಸುವ ಬಗ್ಗೆಯೇ ಸಭೆಯಲ್ಲಿ ಪ್ರಧಾನವಾಗಿ ಚರ್ಚಿಸಲಾಯಿತು. ನೀರು ಹಂಚಿಕೆಗಾಗಿ ನದಿ ನೀರು ನಿರ್ವಹಣಾ ಮಂಡಳಿ ರಚಿಸಬೇಕಿದ್ದು, ಅದರ ಸ್ವರೂಪ, ಕಾರ್ಯವೈಖರಿ ಯಾವ ರೀತಿ ಇರಬೇಕು ಎಂಬ ಕುರಿತು ಎಲ್ಲ ರಾಜ್ಯಗಳು ಒಂದು ವಾರದೊಳಗೆ ತಮ್ಮ ಅಭಿಪ್ರಾಯ ಸಲ್ಲಿಸುವಂತೆ ತಿಳಿಸಲಾಗಿದೆ ಎಂದು ಉಪೇಂದ್ರ ಪ್ರಸಾದ್ ಸಿಂಗ್ ಸಭೆಯ ನಂತರ ತಿಳಿಸಿದರು.