ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೆಂಗ್‌ಸರ್ಕಾರ್ ಸುಳ್ಳುಗಾರ: ಶ್ರೀನಿವಾಸನ್‌ ಆರೋಪ

Last Updated 9 ಮಾರ್ಚ್ 2018, 20:14 IST
ಅಕ್ಷರ ಗಾತ್ರ

ಚೆನ್ನೈ: ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಅಧ್ಯಕ್ಷರಾಗಿದ್ದ ದಿಲೀಪ್ ವೆಂಗ್‌ಸರ್ಕಾರ್ ಸುಳ್ಳುಗಾರ ಎಂದು ಬಿಸಿಸಿಐ ಅಧ್ಯಕ್ಷರಾಗಿದ್ದ ಎನ್‌.ಶ್ರೀನಿವಾಸನ್‌ ಆರೋಪಿಸಿದರು.

ತಮಿಳುನಾಡಿನ ಎಸ್‌.ಬದರಿನಾಥ್‌ ಬದಲಿಗೆ ವಿರಾಟ್ ಕೊಹ್ಲಿ ಅವರನ್ನು ತಂಡಕ್ಕೆ ಆಯ್ಕೆ ಮಾಡಿದ್ದರಿಂದ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನ ಕಳೆದುಕೊಳ್ಳಬೇಕಾಗಿತ್ತು ಎಂದು ವೆಂಗ್‌ಸರ್ಕಾರ್‌ ಗುರುವಾರ ಆರೋಪಿಸಿದ್ದರು. ಇದರ ಹಿಂದೆ ಎನ್‌.ಶ್ರೀನಿವಾಸನ್ ಅವರ ಕೈವಾಡ ಇತ್ತು ಎಂದು ಕೂಡ ದೂರಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಶ್ರೀನಿವಾಸನ್‌ ‘ಅವರು ಯಾರಿಗಾಗಿ ಈ ಹೇಳಿಕೆ ನೀಡಿದ್ದಾರೆ ಎಂಬುದೇ ತಿಳಿಯುತ್ತಿಲ್ಲ. ಅವರು ಹೇಳಿದ್ದೆಲ್ಲವೂ ಸುಳ್ಳು. ಕ್ರಿಕೆಟಿಗನೊಬ್ಬ ಹೀಗೆಲ್ಲ ಮಾತನಾಡುವುದು ಸರಿಯಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT