ನಮ್ಮ ಶಾಲೆಯಲ್ಲಿ 14 ಶಿಕ್ಷಕರಿದ್ದು, ಹೆಚ್ಚುವರಿ 5 ಮಂದಿಯನ್ನು ವರ್ಗಾವಣೆ ಮಾಡಬೇಕಿತ್ತು. ಶಾಲೆಯಲ್ಲಿ ಸಲ್ಲಿಸಿದ ಸೇವಾ ಜ್ಯೇಷ್ಠತೆಯ ಆಧಾರದಲ್ಲಿ ಈ ವರ್ಗಾವಣೆಯನ್ನು ಇಲಾಖೆ ಮಾಡಬೇಕಿತ್ತು. ಆದರೆ, ಪ್ರಭಾವಿ ಶಿಕ್ಷಕರೊಬ್ಬರನ್ನು ಶಾಲೆಯಲ್ಲೇ ಉಳಿಸುವ ಕಾರಣ, ಜ್ಯೇಷ್ಠತಾ ಪಟ್ಟಿಯಲ್ಲಿ 11ನೇ ಸ್ಥಾನದಲ್ಲಿರುವ ನನ್ನನ್ನು ಅಂದಿನ ಕ್ಷೇತ್ರಶಿಕ್ಷಣಾಧಿಕಾರಿಗಳು ವರ್ಗಾವಣೆ ಮಾಡಿದ್ದಾರೆ. ಇದು ಕಾನೂನು ಬಾಹಿರ. ಈ ಬಗ್ಗೆ ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳಿಗೆ ಪತ್ರ ಬರೆದರೂ, ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು.