ಕಲಬುರ್ಗಿ: ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರನ್ನಾಗಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರನ್ನು ಸರ್ಕಾರ ನೇಮಿಸಿದೆ.
ಈ ಭಾಗದ ಸಚಿವರನ್ನು ಸರದಿಯಂತೆ ಈ ಮಂಡಳಿಗೆ ಅಧ್ಯಕ್ಷರನ್ನಾಗಿ ಎರಡು ವರ್ಷದ ಅವಧಿಗೆ ನೇಮಿಸಲಾಗುತ್ತದೆ.ಮೊದಲ ಬಾರಿಗೆ ದಿ.ಖಮರುಲ್ ಇಸ್ಲಾಂ ಅಧ್ಯಕ್ಷರಾಗಿದ್ದರು. ಆ ನಂತರ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲರನ್ನು ನೇಮಿಸಲಾಗಿತ್ತು.