ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಸಹ ಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ಆಗಿ ಸುರೇಶ್ ಭಯ್ಯಾಜಿ ಜೋಷಿ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.
2009ರಿಂದ ಸಹ ಕಾರ್ಯವಾಹರಾಗಿರುವ ಭಯ್ಯಾಜಿ ಇನ್ನೂ ಮೂರು ವರ್ಷ, ಅಂದರೆ 2021ರವರೆಗೆ ಅದೇ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.
ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣವನ್ನು ಒಳಗೊಂಡ ಆರ್ಎಸ್ಎಸ್ನ ದಕ್ಷಿಣ–ಮಧ್ಯ ಕ್ಷೇತ್ರದ ಕ್ಷೇತ್ರೀಯ ಸಂಘಚಾಲಕರಾಗಿ (ಅಧ್ಯಕ್ಷ) ವಿ.ನಾಗರಾಜ್ ಸಹ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.