ಈ ಪ್ರಕರಣದಲ್ಲಿ ಮಾರ್ಚ್ 20ರವರೆಗೆ ಕಾರ್ತಿ ಅವರ ಬಂಧನಕ್ಕೆ ದೆಹಲಿ ಹೈಕೋರ್ಟ್ ತಡೆ ನೀಡಿದ್ದರ ವಿರುದ್ಧ ಜಾರಿ ನಿರ್ದೇಶನಾಲಯವು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ. ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯವು ತೆಗೆದುಕೊಳ್ಳಬಹುದಾದ ಯಾವುದೇ ಕ್ರಮದ ವಿರುದ್ಧ ರಕ್ಷಣೆ ಪಡೆಯುವ ಸಲುವಾಗಿ ಕಾರ್ತಿ ಕೇವಿಯಟ್ ಸಲ್ಲಿಸಿದ್ದಾರೆ.