‘ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಅಂಕ ಪಡೆದಿದ್ದ ಅದ್ವೈತ್, ವಾಣಿಜ್ಯ ವಿಷಯದಲ್ಲಿ ಓದುವ ಇಚ್ಛೆ ವ್ಯಕ್ತಪಡಿಸಿದ್ದ. ತಂದೆಯು ವಿಜ್ಞಾನ ವಿಭಾಗಕ್ಕೆ ಸೇರಿಸಿದ್ದರು. ಮೊದಲ ವರ್ಷದಲ್ಲಿ ಕಡಿಮೆ ಅಂಕ ಗಳಿಸಿದ್ದ ಆತನಿಗೆ ದ್ವಿತೀಯ ವರ್ಷದಲ್ಲಿ ಅಧ್ಯಯನ ಕಷ್ಟವಾಗಿತ್ತು. ಈ ಬಗ್ಗೆ ತಂದೆಗೂ ಹೇಳಿದ್ದ. ಅದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನವಿದೆ’ ಎಂದು ಕೆ.ಪಿ.ಅಗ್ರಹಾರ ಪೊಲೀಸರು ತಿಳಿಸಿದರು.