ಪ್ರಕರಣವೊಂದರ ವಿಚಾರಣೆಗೆ ಬಂದಿದ್ದ ಮಹದೇವಯ್ಯ, ನ್ಯಾಯಧೀಶ ಅರವಿಂದ್ ಕುಮಾರ್ ಸಮೀಪವೇ ಮೊಬೈಲ್ನಲ್ಲಿ ಮಾತನಾಡುತ್ತಿದ್ದರು. ಅದನ್ನು ಗಮನಿಸಿದ ನ್ಯಾಯಾಧೀಶರು, ‘ನ್ಯಾಯಾಲಯದಲ್ಲಿ ಮೊಬೈಲ್ ಬಳಕೆ ಮಾಡಬಾರದು ಎಂಬ ವಿಚಾರ ಪೊಲೀಸ್ ಅಧಿಕಾರಿಯಾಗಿರುವ ನಿಮಗೆ ಗೊತ್ತಿಲ್ಲವೇ’ ಎಂದು ಅವರನ್ನು ತರಾಟೆಗೆ ತೆಗೆದುಕೊಂಡರು.