‘ರಾಜ್ಯದಲ್ಲಿ ವೀರಶೈವ ಲಿಂಗಾಯತ ನೌಕರರ ಸ್ಥಿತಿ ಶೋಚನೀಯವಾಗಿದೆ. ಸಮುದಾಯದ ಉನ್ನತ ಅಧಿಕಾರಿಗಳನ್ನು ಆಯಕಟ್ಟಿನ ಹುದ್ದೆಗಳಿಗೆ ನೇಮಿಸಿಲ್ಲ. ಅಲ್ಲದೆ ಸಮಾಜದ ಛಿದ್ರ ಮಾಡಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ. ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹಾಗೂ ವೀರಶೈವ ಲಿಂಗಾಯತರ ಪರಮೋಚ್ಚ ಗುರುಗಳಾದ ಸಿದ್ದಗಂಗಾ ಶ್ರೀಗಳು ವೀರಶೈವ ಲಿಂಗಾಯತ ಒಂದೇ ಎಂದು ಹೇಳಿದರೂ ಕೇಳದೆ ಸಮಾಜವನ್ನು ಒಡೆದಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದರು.