ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಸಿಗರ ಸಂಖ್ಯೆ ಹೆಚ್ಚಳ: ಖರ್ಗೆ

Last Updated 11 ಮಾರ್ಚ್ 2018, 19:46 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ 2017ನೇ ಸಾಲಿನಲ್ಲಿ ದೇಶಿ ಪ್ರವಾಸಿಗರ ಸಂಖ್ಯೆ ಶೇ 38ರಷ್ಟು ಹೆಚ್ಚಾಗಿದೆ ಎಂದು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

‘ಕಳೆದ ವರ್ಷವನ್ನು ವನ್ಯಜೀವಿ ವರ್ಷ ಎಂದು ಘೋಷಿಸಲಾಗಿತ್ತು. 2016-17ರ ಅವಧಿಗೆ ಹೋಲಿಸಿದರೆ ಜಂಗಲ್ ರೆಸಾರ್ಟ್‌ಗಳ ಕೊಠಡಿಗಳ ಬಳಕೆ ಶೇ 9.6ರಷ್ಟು ಹೆಚ್ಚಾಗಿದೆ. ಹೊಸದಾಗಿ ಆರಂಭಗೊಂಡ ಕಾನನ ಶಿಬಿರಗಳು ಮತ್ತು ಟ್ರಯಲ್‌ಗಳಲ್ಲಿ ಬಳಕೆ ಪ್ರಮಾಣ
ಶೇ 98ರಷ್ಟು ಜಾಸ್ತಿಯಾಗಿದೆ. ಒಟ್ಟಾರೆ, ಜಂಗಲ್ ರೆಸಾರ್ಟ್‌ಗಳ ವರಮಾನ ಶೇ 5ರಷ್ಟು ಹೆಚ್ಚಾಗಿದೆ’ ಎಂದು ಅವರು ತಿಳಿಸಿದ್ದಾರೆ.

‘ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವರಮಾನ ಗಣನೀಯವಾಗಿ ಹೆಚ್ಚಾಗಿದೆ. ನಿಗಮದ ಹೋಟೆಲ್‌ಗಳ ವರಮಾನದಲ್ಲಿ ಶೇ 20.44 ರಷ್ಟು ಏರಿಕೆಯಾಗಿದೆ. ಹೋಟೆಲ್‌ಗಳ ವಾಸ್ತವ್ಯ ಪ್ರಮಾಣವು ಶೇ 20.44ರಿಂದ ಶೇ 43.7ಕ್ಕೆ ಏರಿಕೆ ಕಂಡಿದೆ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT