ಈ ಸಂಬಂಧ ಅಶೋಕನಗರ ಠಾಣೆಗೆ ಮಾ. 5ರಂದು ಅತೇರ್ ದೂರು ನೀಡಿದ್ದರು. ಇದೊಂದು ಸಾಮಾನ್ಯ ಪ್ರಕರಣವೆಂದು ತಿಳಿದಿದ್ದ ಪೊಲೀಸರು, ಎನ್ಸಿಆರ್ (ಗಂಭೀರವಲ್ಲದ ಪ್ರಕರಣ) ಮಾತ್ರ ದಾಖಲಿಸಿಕೊಂಡಿದ್ದರು. ಅದನ್ನೇ ನ್ಯಾಯಾಲಯಕ್ಕೆ ನೀಡಿದ್ದರು. ‘ಪ್ರಕರಣವು ಗಂಭೀರವಾಗಿದ್ದು, ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿ’ ಎಂದು ಪೊಲೀಸರಿಗೆ ನ್ಯಾಯಾಲಯ ಸೂಚನೆ ನೀಡಿತ್ತು. ಅದರನ್ವಯ ಪೊಲೀಸರು, ಜೀವ ಬೆದರಿಕೆ (ಐಪಿಸಿ 507) ಆರೋಪದಡಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.