ಸಂಘದ ಕಾರ್ಯದರ್ಶಿಯಾಗಿರುವ ಪ್ರಣವ್ ಮೊಹಂತಿ ದೆಹಲಿಯಲ್ಲಿದ್ದಾರೆ. ಸಂಘದ ಪದಾಧಿಕಾರಿಗಳ ಜೊತೆ ಚರ್ಚಿಸದೆ ಈ ರೀತಿಯ ಪತ್ರವನ್ನು ಶರ್ಮಾ ಬರೆದಿದ್ದಾರೆ ಎಂದು ಮೊಹಂತಿ ಅವರು ದೂರವಾಣಿ ಮೂಲಕ ಮುಖ್ಯಮಂತ್ರಿ ಕಚೇರಿಗೆ ಸ್ಪಷ್ಟನೆ ನೀಡಿದ್ದಾರೆ ಎಂದೂ ಸಚಿವಾಲಯ ತಿಳಿಸಿದೆ.
***
ಪತ್ರದಲ್ಲಿ ಪ್ರಸ್ತಾಪಿಸಿರುವ ಘಟನೆಗಳು
* ಮೈಸೂರಿನಲ್ಲಿ ಐಎಎಸ್ ಅಧಿಕಾರಿ ರಶ್ಮಿ ಮೇಲೆ ಗೂಂಡಾಗಳು ಹಲ್ಲೆ ನಡೆಸಿದರು.
* ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಶಿಖಾ ಅವರ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುವಂತೆ ಗಂಭೀರ ರೀತಿಯಲ್ಲಿ ದಾಳಿ ನಡೆಯಿತು. ಎಫ್ಐಆರ್ ದಾಖಲಿಸಲು ಅವರು ಗಂಟೆಗಟ್ಟಲೆ ಕಾಯಬೇಕಾಯಿತು.
* ಯುಬಿ ಸಿಟಿಯಲ್ಲಿ ಅಮಾಯಕನ ಮೇಲೆ ದಾಳಿಯಾಯಿತು. ಆದರೆ, ಕ್ರಮ ಕೈಗೊಳ್ಳುವಲ್ಲಿ ಉದಾಸೀನ ತೋರಲಾಯಿತು.
* ಒಬ್ಬ ರಾಜಕಾರಣಿ, ಪೆಟ್ರೋಲ್ ಸುರಿದು ಸರ್ಕಾರಿ ಕಚೇರಿಯನ್ನೇ ಸುಟ್ಟುಹಾಕಲು ಮುಂದಾಗಿದ್ದ.