ಬೆಂಗಳೂರು: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ರಾಜ್ಯದ ವಿವಿಧೆಡೆಗಳಲ್ಲಿ ಒಂಬತ್ತು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಶುಕ್ರವಾರ ಶೋಧ ನಡೆಸಿದ್ದರು.
ಶೋಧ ಕಾರ್ಯದ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಸ್ಥಿರ ಮತ್ತು ಚರಾಸ್ತಿಗಳು ಪತ್ತೆಯಾಗಿವೆ ಎಂದು ಭ್ರಷ್ಟಾಚಾರ ನಿಗ್ರಹ ದಳ ತಿಳಿಸಿದೆ. ಜತೆಗೆ, ಪತ್ತೆಯಾಗಿರುವ ಸಂಪತ್ತಿನ ಬಗ್ಗೆ ಮಾಹಿತಿಯನ್ನೊಳಗೊಂಡ ಪ್ರಕಟಣೆ ಬಿಡುಗಡೆ ಮಾಡಿದೆ.