ಅಣ್ಣಿಗೇರಿ: ಅಣ್ಣಿಗೇರಿ ಪುರಸಭೆಯ ಅಧ್ಯಕ್ಷ ಭೀಮಪ್ಪ(ಮುತ್ತು) ದ್ಯಾವನೂರ ವಿರುದ್ಧ ಸೋಮವಾರ (ಮಾ.12) ಅವಿಶ್ವಾಸ ಮಂಡನೆ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಾ.8ರ ರಾತ್ರಿಯಿಂದಲೇ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಪಟ್ಟಣದಿಂದ ಹೊರಹೋಗಿ, ಯಾರಿಗೂ ಸಿಗದಿರುವುದು ತಡವಾಗಿ ಬೆಳಕಿಗೆ ಬಂದಿದೆ.