‘ಇಷ್ಟೆಲ್ಲಾ ಆಗಿದ್ದರೂ ತಮಗೆ ಮಾಹಿತಿಯೇ ಇಲ್ಲ ಎಂದು ಸಿದ್ದರಾಮಯ್ಯ ನುಣುಚಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಅಪರಾಧ ಪ್ರಕರಣಗಳಲ್ಲಿ ಬೆಂಗಳೂರು ಎರಡನೇ ಸ್ಥಾನದಲ್ಲಿದೆ. ಕ್ರಿಮಿನಲ್ಗಳು, ಗೂಂಡಾಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಲಾಗುತ್ತಿದೆ. ಹೇಗಾದರೂ ಮಾಡಿ ಮತ್ತೆ ಸರ್ಕಾರ ರಚಿಸಬೇಕೆಂಬ ಹಟಕ್ಕೆ ಬಿದ್ದಂತಿರುವ ಇವರ ನಡವಳಿಕೆ ಅನುಮಾನಕ್ಕೆಡೆ ಮಾಡಿಕೊಟ್ಟಿದೆ’ ಎಂದರು.