ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲ್ಲೇಶ್ವರ: 17ರಂದು ಜನಸ್ಪಂದನ

Last Updated 12 ಮಾರ್ಚ್ 2018, 20:03 IST
ಅಕ್ಷರ ಗಾತ್ರ

ಬೆಂಗಳೂರು: ಮಲ್ಲೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್‌ಗಳ ಕುಂದುಕೊರತೆಗಳಿಗೆ ಪರಿಹಾರ ಕಂಡುಕೊಳ್ಳಲು ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆ‌ಗಳ ಆಶ್ರಯದಲ್ಲಿ ‘ಜನಸ್ಪಂದನ–ಸಿಟಿಜನ್ಸ್‌ ಫಾರ್‌ ಚೇಂಜ್‌’ ಕಾರ್ಯಕ್ರಮ ಮಲ್ಲೇಶ್ವರದ ಕೃಷ್ಣದೇವರಾಯ ಕಲಾಮಂದಿರದಲ್ಲಿ ಇದೇ 17ರಂದು ಬೆಳಿಗ್ಗೆ 10ಕ್ಕೆ ಏರ್ಪಡಿಸಲಾಗಿದೆ.

ಶಾಸಕ ಡಾ.ಸಿ.ಎನ್‌. ಅಶ್ವತ್ಥನಾರಾಯಣ, ಕ್ಷೇತ್ರದ ವಿವಿಧ ವಾರ್ಡ್‌ಗಳ ಪಾಲಿಕೆ ಸದಸ್ಯರು, ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್‌ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಾರ್ವಜನಿಕರು ತಮ್ಮ ವಾರ್ಡ್‌ಗಳ ಕುಡಿಯುವ ನೀರು ಪೂರೈಕೆ ವ್ಯತ್ಯಯ, ಕಸ ವಿಲೇವಾರಿ ಸಮಸ್ಯೆ, ರಸ್ತೆ ಸುರಕ್ಷತೆ, ಉದ್ಯಾನಗಳಿಗೆ ಸಂಬಂಧಿಸಿದ ಕುಂದುಕೊರತೆಗಳ ಬಗ್ಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು. ತನ್ಮೂಲಕ ವಾರ್ಡ್‌ನ ಅಭಿವೃದ್ಧಿಯಲ್ಲಿ ಕೈಜೋಡಿಸಬಹುದು.

ಕ್ಷೇತ್ರದ ಕುಂದುಕೊರತೆಗಳ ಬಗ್ಗೆ ಗಮನ ಸೆಳೆಯಲು ಇಚ್ಛಿಸುವವರು 17ರಂದು ಬೆಳಿಗ್ಗೆ 9ರಿಂದ ಸ್ಥಳದಲ್ಲೇ ಹೆಸರು ನೋಂದಾಯಿಸಬಹುದು. ಬೆಳಿಗ್ಗೆ 10ರಿಂದ ಪ್ರಶ್ನೆ ಕೇಳಲು ಅವಕಾಶ ಕಲ್ಪಿಸಲಾಗುತ್ತದೆ.

ಈ ಬಗ್ಗೆ ಇ–ಮೇಲ್‌ janaspandana@printersmysore.co.in ಕೂಡಾ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ: 9606912148 (ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ಕರೆ ಮಾಡಬಹುದು)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT