ಸೋಮವಾರ ಪತ್ರಿಕಾಗೋ ಷ್ಠಿಯಲ್ಲಿ ಮಾತನಾಡಿದ ಸಮಿತಿ ಮುಖಂಡ ಎಚ್.ವಿ. ಅನಂತ ಸುಬ್ಬರಾವ್, ‘ರಕ್ಷಣಾ ವಲಯದ ಕಾರ್ಮಿಕ ಸಂಘಟನೆಗಳ ನೌಕರರು, ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಹಲವು ಭಾರಿ ಪ್ರತಿಭಟಿಸಿದ್ದಾರೆ. ಇದರ ಮುಂದುವರೆದ ಭಾಗವಾಗಿ ರಕ್ಷಣಾ ಉತ್ಪಾದನಾ ವಲಯದ ಕಾರ್ಖಾನೆಗಳ ಕಾರ್ಮಿಕರು ದೇಶ ವ್ಯಾಪಿ ಒಂದು ದಿನದ ಮುಷ್ಕರ ನಡೆಸಲಿದ್ದಾರೆ’ ಎಂದು ತಿಳಿಸಿದರು.