ಗ್ರಾಮೀಣ ಭಾಗದಲ್ಲಿ ನೀರಿನ ಮಿತ ಬಳಕೆ, ಸ್ವಚ್ಛತೆ ಮತ್ತು ಅಂತರ್ಜಲ ಅಭಿವೃದ್ಧಿ ಬಗ್ಗೆ ಸದಸ್ಯರಿಗೆ ಮಾಹಿತಿ ನೀಡುವ ಉದ್ದೇಶಕ್ಕಾಗಿ ಮಾ.16ರವರೆಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಆದರೆ, ಮೊದಲ ದಿನವೇ ಸದಸ್ಯರು ನಿರುತ್ಸಾಹ ತೋರಿದರು. ಕಾರ್ಯಾಗಾರದಲ್ಲಿ ಮಾಹಿತಿ ನೀಡಲು ಬಂದಿದ್ದ ಸಂಪನ್ಮೂಲ ವ್ಯಕ್ತಿಗಳು ನಿರಾಸೆಯಿಂದ ಮನೆಯತ್ತ ಹೆಜ್ಜೆ ಹಾಕಿದರು.