‘ಕೇಂದ್ರ ಸರ್ಕಾರ ರಾಜ್ಯಕ್ಕೆ ಮಹತ್ವ ಕೊಡುತ್ತಿಲ್ಲ. ತಮಿಳುನಾಡು, ಕೇರಳ ರಾಜ್ಯಗಳಲ್ಲಿ ಬಿಜೆಪಿ ಸಂಸದರು ಇಲ್ಲದಿದ್ದರೂ ಆ ರಾಜ್ಯಗಳಿಗೆ ಪ್ರಧಾನಮಂತ್ರಿ ಬಹಳ ಮಹತ್ವ ಕೊಡುತ್ತಾರೆ. ಆದರೆ, ರಾಜ್ಯದಲ್ಲಿ 17 ಜನ ಬಿಜೆಪಿ ಸಂಸದರಿದ್ದಾರೆ, ಆದರೂ ಕೇಂದ್ರ ಸರ್ಕಾರ ನಮ್ಮನ್ನು ಗಂಭೀರವಾಗಿ ಪರಿಗಣಿಸಿಲ್ಲ. ಎಲ್ಲವನ್ನೂ ನಾವು ಹೋರಾಟ ಮಾಡಿ ಪಡೆದುಕೊಳ್ಳಬೇಕಾಗಿದೆ. ಇದು ನಮ್ಮ ದುರ್ದೈವ’ ಎಂದು ಹೇಳಿದರು.