ಕಳೆದ 5 ವರ್ಷಗಳಿಂದ ದಲಿತರು ಮತ್ತು ಸವರ್ಣೀಯರು ಒಟ್ಟಿಗೆ ಹಬ್ಬ ಆಚರಣೆ ಮಾಡುವ ಬಗ್ಗೆ ಚರ್ಚಿಸಲಾಗಿತ್ತು. ಆದರೆ, ಈಗ ಆ ಉದ್ದೇಶಕ್ಕೆ ಅವಕಾಶವಿಲ್ಲವಾಗಿದೆ. ದೇವಾಲಯ ಪ್ರವೇಶಕ್ಕೆ ನಿರಾಕರಿಸಿ ಕೆಲವರು ಬೆದರಿಕೆ ಹಾಕುತ್ತಿದ್ದಾರೆ ಎಂದು ದಲಿತ ಮುಖಂಡರಾದ ರಾಮಕೃಷ್ಣ, ಶ್ರೀನಿವಾಸ್, ಸುರೇಶ್ ಮತ್ತು ಮಹೇಶ್ ಅವರು ಅಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.