ಬೆಂಗಳೂರು: ಉಡುಪಿ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಲಕ್ಷ್ಮೀವರತೀರ್ಥ ಸ್ವಾಮೀಜಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಾರರು ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ‘ಅಷ್ಟಮಠಗಳ ಸ್ವಾಮೀಜಿಗಳ ಬಗ್ಗೆ ಗೌರವ ಇದೆ’ ಎಂದು ಹೇಳಿದರು.
ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ: ‘ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ಇಲ್ಲ. ಒಂದೋ ಭ್ರಷ್ಟಾಚಾರ ಮಾಡಬೇಕು, ಇಲ್ಲವೆಂದರೆ ಸಾಯಬೇಕು ಎಂಬಂತಹ ಸ್ಥಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೃಷ್ಟಿಸಿದ್ದಾರೆ’ ಎಂದು ಶೋಭಾ ಆರೋಪಿಸಿದರು.