ನಗರದ ಬಸವೇಶ್ವರ ನಗರದ ಬಸವ ಮಂಟಪದಲ್ಲಿ ರಾಷ್ಟ್ರೀಯ ಬಸವ ದಳ ಏರ್ಪಡಿಸಿದ್ದ ತಮ್ಮ 73ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಾ.14ರಂದು ಸಚಿವ ಸಂಪುಟ ಸಭೆಯಲ್ಲಿ ಪ್ರತ್ಯೇಕ ಧರ್ಮದ ಕುರಿತು ಚರ್ಚೆ ನಡೆಯಲಿದ್ದು, ಸರ್ಕಾರ ಯಾವ ನಿರ್ಣಯ ಕೈಗೊಳ್ಳಲಿದೆ ಎಂದು ಕಾಯುತ್ತಿದ್ದೇವೆ. ಸರ್ಕಾರದ ನಿರ್ಣಯ ಪ್ರಕಟವಾದ ಬಳಿಕ ಮುಂದಿನ ನಡೆಯ ಬಗ್ಗೆ ಯೋಜನೆ ರೂಪಿಸಲಾಗುವುದು’ ಎಂದರು.