‘ಚುನಾವಣೆ ಹೊಸ್ತಿಲಲ್ಲಿ ಅನೇಕ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗುವುದು. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದ ರೀತಿ ಆಡಳಿತ ನಿರ್ವಹಿಸಲಾಗುವುದು’ ಎಂದರು. ನಗರ ಸಂಚಾರ ವ್ಯವಸ್ಥೆ ಬಗ್ಗೆ ಪ್ರಸ್ತಾಪಿಸಿದ ನಿಕ್ಕಂ, ‘ಸಂಚಾರ ವ್ಯವಸ್ಥೆಯ ಸುಧಾರಣಾ ಕ್ರಮಗಳ ಬಗ್ಗೆಯೂ ಗಮನ ಹರಿಸಿ ಕೂಡಲೇ ಜಿಲ್ಲಾಧಿಕಾರಿ ಜತೆ ಚರ್ಚಿಸಿ, ಶಿಸ್ತುಬದ್ಧವಾದ ಸಂಚಾರ ವ್ಯವಸ್ಥೆ ರೂಪಿಸಲು ತೀರ್ಮಾನ ಕೈಗೊಳ್ಳಲಾಗುವುದು’ ಎಂದರು.