ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಕ್ಯಾಂಟೀನ್ಗೆ ಚಾಲನೆ ಚಾಲನೆ ನೀಡಿ ಮಾತನಾಡಿ, ‘ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಇಂದಿರಾ ಕ್ಯಾಂಟೀನ್ ಯೋಜನೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆರಂಭದಲ್ಲಿ ಬೆಂಗಳೂರು ನಗರಕ್ಕೆ ಮಾತ್ರವೇ ಸೀಮಿತವಾಗಿದ್ದ ಈ ಯೋಜನೆಯನ್ನು ಹಂತ ಹಂತವಾಗಿ ಜಿಲ್ಲೆ, ತಾಲ್ಲೂಕು, ನಗರ ಪ್ರದೇಶಗಳಿಗೆ ವಿಸ್ತರಿಸಲಾಗುತ್ತಿದೆ. ಈ ಮೂಲಕ ಜನರು ಸರ್ಕಾರದ ಮೇಲೆ ಇಟ್ಟಿದ್ದ ಭರವಸೆ ಉಳಿಸಿಕೊಂಡಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದರು.