ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ ತುಂತುರು ಮಳೆ

Last Updated 14 ಮಾರ್ಚ್ 2018, 10:07 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯ ವಿವಿಧೆಡೆ ಮಂಗಳವಾರ ಸಂಜೆ ಕೆಲ ಸಮಯ ತುಂತುರು ಮಳೆಯಾಗಿದೆ.

ಬೆಳಿಗ್ಗೆಯಿಂದ ಬಿಸಿಲಿನ ವಾತಾವರಣವಿದ್ದ ನಗರದಲ್ಲಿ ಮಧ್ಯಾಹ್ನದ ಬಳಿಕ ಮೋಡ ಆವರಿಸಿಕೊಂಡಿತ್ತು. ಸಂಜೆ ವೇಳೆ ಸಣ್ಣನೆ ಮಳೆ ಜಿನುಗಲು ಆರಂಭಿಸಿತು. ಸುಮಾರು 10 ನಿಮಿಷ ಹನಿಗಳ ಸಿಂಚನವಾಯಿತು.

ಕೊಳ್ಳೇಗಾಲ ಹಾಗೂ ಯಳಂದೂರು ತಾಲ್ಲೂಕಿನಲ್ಲೂ ತುಂತುರು ಮಳೆ ಸುರಿಯಿತು.

ವಿಪರೀತ ಬಿಸಿಲಿನ ಧಗೆ, ದೂಳಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆ ತುಸು ತಂಪು ನೀಡಿತು. ನಗರದ ಬಹುತೇಕ ರಸ್ತೆಗಳನ್ನು ಅಗೆದಿರುವುದರಿಂದ ಕೆಸರು ಉಂಟಾಗಿ ಪಾದಚಾರಿಗಳು ಮತ್ತು ವಾಹನ ಸವಾರರು ಓಡಾಡಲು ಪರದಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT