2009ರಲ್ಲಿ ಬಂಧನಕ್ಕೊಳಗಾಗಿ ಸುಮಾರು ಎಂಟು ವರ್ಷಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದ ದೇವೇಂದ್ರ ಅವರಿಗೆ ಹೈಕೋರ್ಟ್ ಏಳು ತಿಂಗಳ ಹಿಂದೆ ಷರತ್ತುಬದ್ಧ ಜಾಮೀನು ನೀಡಿತ್ತು. ಆದೇಶ ಪ್ರಕಟಿಸುವ ವೇಳೆ ಅವರು ನ್ಯಾಯಾಲಯದಲ್ಲಿ ಹಾಜರಿದ್ದರು. ‘ನ್ಯಾಯಕ್ಕೆ ಜಯ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧವೇ ಇಲ್ಲದ ನನ್ನನ್ನು ಆರೋಪಿಯನ್ನಾಗಿಸಿ ಬಂಧಿಸಲಾಗಿತ್ತು. ಮಾಡದ ತಪ್ಪಿಗೆ ಜೈಲು ವಾಸ ಅನುಭವಿಸಬೇಕಾಯಿತು’ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.