ಬೆಳ್ಳಂದೂರು ಮತ್ತು ಅಗರ ಕೆರೆಗಳ ಬಫರ್ ವಲಯದಲ್ಲಿ, ಅತಿಕ್ರಮ ಮಾಡಿರುವ ಜಮೀನನ್ನು ಸರ್ಕಾರಕ್ಕೆ ಮರಳಿಸಬೇಕಲ್ಲದೆ, ಕೆರೆಯ ಪುನಶ್ಚೇತನಕ್ಕೆ ನೆರವಾಗಬೇಕು ಎಂಬ ಷರತ್ತುಗಳಿರುವ ಆದೇಶದ ಪಾಲನೆ ಆಗಿದೆಯೇ ಇಲ್ಲವೇ ಎಂಬ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ನಮ್ಮ ಬೆಂಗಳೂರು ಪ್ರತಿಷ್ಠಾನ ಸಲ್ಲಿಸಿದ್ದ ದೂರಿನ ವಿಚಾರಣೆ ನಡೆಸಿದ್ದ ನ್ಯಾಯಪೀಠವು, ಈ ಕುರಿತು ಸಮಿತಿಯೊಂದನ್ನು ರಚಿಸಿ ವರದಿ ಪಡೆದಿತ್ತು.